top of page

ಮುರುಘಾಮಠದಲ್ಲಿಂದು (ಮಾ. 30ರಂದು) ಶೂನ್ಯಪೀಠದ ಪ್ರಥಮಾಧ್ಯಕ್ಷ ಅಲ್ಲಮಪ್ರಭುದೇವರ ಜಯಂತಿ (ಶರಣೋತ್ಸವ)

29 Mar 2025

ಚಿತ್ರದುರ್ಗ, ಮಾ. 30 : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು (30-3-2025) ಭಾನುವಾರ ಸಂಜೆ 6 ಗಂಟೆಗೆ ಶೂನ್ಯಪೀಠದ ಪ್ರಥಮಾಧ್ಯಕ್ಷರಾದ ಶ್ರೀ ಅಲ್ಲಮಪ್ರಭುದೇವರ ಜಯಂತಿ (ಶರಣೋತ್ಸವ) ಹಾಗೂ ನೂತನ ವರ್ಷಾರಂಭ ಸಮಾರಂಭವು ಶ್ರೀಮಠದ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ತಾಣದ ಆವರಣದಲ್ಲಿ ಜರುಗಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ್, ಐ.ಎ.ಎಸ್.(ನಿ.) ವಹಿಸುವರು. ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಸದಸ್ಯರುಗಳಾದ ಡಾ.ಪಿ.ಎಸ್. ಶಂಕರ್ ಹಾಗೂ ಎಸ್.ಎನ್. ಚಂದ್ರಶೇಖರ್ ಅವರು ಭಾಗವಹಿಸಲಿದ್ದಾರೆ. ಸರ್ವರಿಗೂ ಸ್ವಾಗತವೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

SJM Vidyapeeta is committed to transforming lives through education and is committed to providing accessible and affordable education to all.

Get in Touch

Thanks for submitting!

Registration Office

Admissions Office

© 2024 by Shakti Prasad, System Analyst, BMCH

bottom of page