top of page

29 Mar 2025
ಚಿತ್ರದುರ್ಗ, ಮಾ. 30 : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು (30-3-2025) ಭಾನುವಾರ ಸಂಜೆ 6 ಗಂಟೆಗೆ ಶೂನ್ಯಪೀಠದ ಪ್ರಥಮಾಧ್ಯಕ್ಷರಾದ ಶ್ರೀ ಅಲ್ಲಮಪ್ರಭುದೇವರ ಜಯಂತಿ (ಶರಣೋತ್ಸವ) ಹಾಗೂ ನೂತನ ವರ್ಷಾರಂಭ ಸಮಾರಂಭವು ಶ್ರೀಮಠದ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ತಾಣದ ಆವರಣದಲ್ಲಿ ಜರುಗಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ್, ಐ.ಎ.ಎಸ್.(ನಿ.) ವಹಿಸುವರು. ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಸದಸ್ಯರುಗಳಾದ ಡಾ.ಪಿ.ಎಸ್. ಶಂಕರ್ ಹಾಗೂ ಎಸ್.ಎನ್. ಚಂದ್ರಶೇಖರ್ ಅವರು ಭಾಗವಹಿಸಲಿದ್ದಾರೆ. ಸರ್ವರಿಗೂ ಸ್ವಾಗತವೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
bottom of page